ನೆನಪಿನ ಬುತ್ತಿಯಾಗಿ ದಾಂಪತ್ಯದ ದ್ಯೋತಕವಾಗಿ ಚೂಡಾಮಣಿಯ ನಿರ್ವಚನವಾಗುತ್ತಲೇ ಕುಟೀರ ಮತ್ತು
ಅಯೋಧ್ಯೆ ಎಂಬ ಎರಡು ಚಿತ್ರಣಗಳ ಮೂಲಕ ಭಿನ್ನ
ಸಾಮಾಜಿಕ ಸಂದರ್ಭಗಳನ್ನು ನಿರೂಪಣೆ ಮಾಡುವುದು
ಈ ನಾಟಕದ ಶಕ್ತಿಗಳಲ್ಲಿ ಮುಖ್ಯವಾದುದು, ಆಪ್ತವಾಗಿ
ಸಂವಹನ ಮಾಡುವ ಪಾತ್ರಗಳು, ದೇಸಿ ನುಡಿಗಟ್ಟು,
ಕಥೆ ಹೇಳುವ ತಂತ್ರ, ಕಾವ್ಯಾತ್ಮಕ ಭಾಷೆ , ಕಥಾ
ಹಂದರಕ್ಕೆ ಪೂರಕವಾಗಿ ನಿಲ್ಲುವ ಹಾಡುಗಳು, ಸನ್ನಿವೇಷ
ಮತ್ತು ದೃಶ್ಯಗಳ ಕಟ್ಟುವಿಕೆ,ನವಿರು ಸಂಭಾಷಣೆ ಇತ್ಯಾದಿಗಳು
ನಾಟಕವನ್ನು ಓದಲು ಪ್ರಿಯವೆನ್ನಿಸುತ್ತದೆ.