ಸರಿಯಾಗಿ ಅದೇ ಸಮಯಕ್ಕೆ ಹಿತ್ತಲಿನಲ್ಲಿ ಸದ್ದಾಯು ಯಾಕೋ ಹಿತ್ತಲಿನ ಬೇಲಿಯ ಬಾಗಿಲನ್ನು ತೆರೆಯುತ್ತಿರುವಂತೆ ಭಾಸವಾಯು ಕಮಲಕ್ಕೆ ಹಿತ್ತಲಿಗೆ ಹೋದಳು. ವಾಜಿಯು ಹಿಂಬಾಲಿಸಿದೆ. ಅಲ್ಲಿ ಬೆಳಿಗ್ಗೆ ವಾಜಿಯಿಂದ ಕಲ್ಲಿಗೇಟು ತಿಂದ ಹಂದಿ ಗೇಟನ್ನು ನೂಕುತ್ತಿತ್ತು, ಕಮಲಕ್ಕಗೆ ಅದೇನನ್ನಿಸಿತೋ ಏನೋ, ಸೀದಾ ಹೋಗಿ ಗೇಟನ್ನು ತೆರೆದುಬಿಟ್ಟಳು. ಹಂದಿ ಒಳನುಗ್ಗಿ ಮಲ್ಲಿಗೆಯ ಹಂದರದೆ ಕೆಳಗೆ ಸ್ವಲ್ಪ ಮಣ್ಣು ಕೆದರಿ ಕುಳಿತುಕೊಂಡುಬಿಟ್ಟಿತು. ಕಮಲಕ್ಕೆ ಆ ಹಂದಿಯನ್ನು ನೋಡಿ, 'ರಾಯಲೇ, ಹಂದಿ ಹಡವಣಿಗಿ ಸುಸೂತ್ರ ಆಗಪ್ಪ ಅಂತ ಮನಸ್ಸಿನಲ್ಲೇ ಪ್ರಾರ್ಥಿಸಿ, ವಾಜಿಯ ಕೈ ಹಿಡಿದುಕೊಂಡು ಬಸ್ ನಿಲ್ದಾಣದ ಕಡೆ ಹೊರಟುಬಿಟ್ಟಳು. ಆದರೆ ಹಸಿವು ಮತ್ತು ಅವಮಾನಗಳಿಂದ ಕಂಗಾಲಾದ ವಾಜಿ ಈಗ ಬಸ್ಸಿನಲ್ಲಿ ಸೀಟನ್ನು ಹಿಡಿಯುತ್ತಾನೆಂಬುದು ಸಂಶಯುದ ವಿಷಯ.
ISBN 978938